ಮುಡೂರು ತೋಕೆ ಶಾಲಾ 70ನೆ ವಾರ್ಷಿಕೋತ್ಸವ
ವರ್ಕಾಡಿ : ಶ್ರೀ ಸುಬ್ರಹ್ಮಣ್ಯ ಅನುದಾನಿತ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ಮಾರ್ಚ್ 2 ರಂದು ಬೆಳಗ್ಗೆ 9.30ಕ್ಕೆ ಸರಿಯಾಗಿ ಶಾಲಾ ಪಿ ಟಿ ಎ ಅಧ್ಯಕ್ಷ ಶ್ರೀ ನವೀನ್ ಅವರು ಧ್ವಜಾರೋಹಣ ಗೈದರು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್ ಕಾರ್ಯಕ್ರಮದ ಉದ್ಘಾಟನೆ ಯನ್ನು ನೆರವೇರಿಸಿದರು. ಸಂಜೆ 5 ರ ವರೆಗೆ ಶಾಲಾ ವೇದಿಕೆಯಲ್ಲಿ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ಬೆಳಗ್ಗೆ 10.30ಕ್ಕೆ ಸರಿಯಾಗಿ ಶಾಲಾ ಪ್ರಭಂಡಕರು ಶ್ರೀ ದೇವಪ್ಪ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿಗಳಾದ ಶ್ರೀ ಕೃಷ್ಣ ಮೂರ್ತಿಯವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು. ವಾರ್ಡ್ ಸದಸ್ಯರಾದ ಶ್ರೀ ಅಬ್ದುಲ್ ಲತೀಫ್, ಶಿವರಾಜ್ , ಮೂಸ ಕುಂಙಿ, ನಿವೃತ್ತ ಅಧ್ಯಾಪಕಿ ಶ್ರೀಮತಿ ಚಂದ್ರಾವತಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ನವೀನ,ಮಾತೃ ಸಂಘದ ಅದ್ಯಕ್ಷೆಯಾದ ಶ್ರೀಮತಿ ಸರಿತಾ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾದಯರು ಶ್ರೀ ಶೈಲೇಶ್ ಎಮ್ ರವರ ಸ್ವಾಗತದೊಂದಿಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಾಪಕಿ ಶ್ರೀಮತಿ ಫೌಸಿಯವರು ಶಾಲಾ ವಾರ್ಷಿಕ ವರದಿಯನ್ನು ಮಂಡಿಸಿದರು.ಈ ಸಂದರ್ಭದಲ್ಲಿ ಶಾಲಾ ಅಡುಗೆ ಕರ್ಮಿಕರಾದ ಶ್ರೀಮತಿ ಕುಸುಮರವರಿಗೆ ಮತ್ತು ಶಾಲಾ ಪೂರ್ವ ವಿದ್ಯಾರ್ಥಿ ಮತ್ತು ಉದ್ಯಮಿ ಜಯಪ್ರಕಾಶ್ ರವರಿಗೆ ಗೌರಾವಾಭಿನಂದನೆಯನ್ನು ಮಾಡಲಾಯಿತು. ಶಾಲಾ ಅಧ್ಯಾಪಕಿ ಶ್ರೀಮತಿ ಚಿತ್ರಾ ಕಾರ್ಯಕ್ರಮ ನಿರೂಪಿಸಿ ಶಾಲಾ ಅಧ್ಯಾಪಿಕೆ ಶ್ರೀಮತಿ ಜಯಲಕ್ಷ್ಮಿ ವಂದಿಸಿದರು.