ರಕ್ಷಕ ಶಿಕ್ಷಕ ಸಂಘದ ಮಹಾ ಸಭೆ 2026
ದಿನಾಂಕ 10/07/2026 ನೇ ಶುಕ್ರವಾರದಂದು ಸರಿಯಾಗಿ 2 ಗಂಟೆಗೆ ಈ ವರ್ಷದ ಮೊದಲ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ಜರುಗಿತು. ಶಾಲಾ ಪ್ರಬಂಧಕರು, ಪಿಟಿಎ ಅಧ್ಯಕ್ಷರಾದ ಶ್ರೀ ಅಬ್ದುಲ್ ಕಾಸಿಂ ,ಉಪಾಧ್ಯಕ್ಷರಾದ ಅಬೂಬಕರ್ ಸಿದ್ಧಿಕ್, ಮಾತೃ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಪ್ರೀತಿಕ ಹಾಗೂ ರಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು .ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಪ್ರಬಂಧಕರಾದ ಶ್ರೀದೇವಪ್ಪ ಶೆಟ್ಟಿ ಅವರು ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. .ಪಿಟಿಎ ಅಧ್ಯಕ್ಷರಾದ ಶ್ರೀ ಅಬ್ದುಲ್ ಕಾಸಿಮ್ ರವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು. ಶಾಲಾ ಮುಖ್ಯೋಪಾಧ್ಯಯರಾದ ಶ್ರೀ ಶೈಲೇಶ್ ರವರು ಬಂದಿರುವ ಅತಿಥಿಗಳನ್ನು ಸ್ವಾಗತಿಸಿದರು. ಶಾಲಾ ವಿಷಯಕ್ಕೆ ಸಂಬಂಧಿಸಿದಂತೆ ಕೆಲವೊಂದು ವಿಷಯಗಳನ್ನು ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ತಿಳಿಸಿದರು. ಕಳೆದ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದ ವರದಿಯನ್ನು ಅಧ್ಯಾಪಕಿ ಶ್ರೀಮತಿ ಚಿತ್ರ ರವರು ಮಂಡಿಸಿದರು. ಬಳಿಕ ನೂತನ ಪಿಟಿಎ ಅಧ್ಯಕ್ಷರ ಹಾಗೂ ಕಾರ್ಯಕಾರಿ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಿತು. ಶ್ರೀ ಅಬ್ದುಲ್ ಕಾಸಿಂ ರವರು ಪಿಟಿಎ ಅಧ್ಯಕ್ಷರಾಗಿ ,ಹಾಗೂ ಶ್ರೀ ಅಬೂಬಕ್ಕರ್ ಸಿದ್ದಿಕ್ ರವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಶ್ರೀಮತಿ ಸವಿತ ರವರು ಮಾತೃ ಸಂಘದ ಅಧ್ಯಕ್ಷೆ ಯಾಗಿಯೂ,ಶ್ರೀಮತಿ ಶೋಭಾರವರು ಉಪಾಧ್ಯಕ್ಷೆಯಾಗಿಯೂ ಆಯ್ಕೆಯಾದರು. ಬಳಿಕ ಕಾರ್ಯಕಾರಿ ಸಮಿತಿಯನ್ನು ರೂಪಿಸಲಾಯಿತು.ಅಧ್ಯಾಪಕಿ ಶ್ರೀಮತಿ ಲಾವಣ್ಯರವರು ಧನ್ಯವಾದ ಸಮರ್ಪಿಸಿದರು.
.jpeg)

No comments:
Post a Comment